ಪುತ್ತೂರು:- ಕೋಲ್ಕೋತ್ತಾದ ಆರ್ ಜಿಆರ್ ವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ, ಹತ್ಯೆ ಹಾಗೂ ಆಸ್ಪತ್ರೆ ಮೇಲೆ ದುಷ್ಕಮಿ೯ಗಳ ದಾಳಿಯನ್ನ ಖಂಡಿಸಿ ಆಗಸ್ಟ್ 17 ರಿಂದ 18 ರ ಬೆಳಗ್ಗಿನವರೆಗೆ ರಾಷ್ಟ್ರವ್ಯಾಪಿ ವೈದ್ಯಕೀಯ ಸೇವೆಗಳನ್ನು ಬಂದ್ ಮಾಡುವುದಾಗಿ ಭಾರತೀಯ ವೈದ್ಯಕೀಯ ಸಂಘ ಘೋಷಿಸಿದ್ದು ಪುತ್ತೂರಿನಲ್ಲಿಯೂ ವೈದ್ಯಕೀಯ ಸೇವೆಗಳು ಬಂದ್ ಆಗಲಿದೆ ಎಂದು ಮಾಹಿತಿ ನೀಡಿದೆ,
ಪುತ್ತೂರು ಶಾಖೆಯ ಸಕಾ೯ರಿ ಮತ್ತು ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್ ಗಳಲ್ಲಿ ಆ 17 ರ ಶನಿವಾರ ಬೆಳಗ್ಗೆ 6 ಗಂಟೆಯಿಂದ ಆ, 18 ರ ಭಾನುವಾರ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವೈದ್ಯಕೀಯ ಸೇವೆಗಳು ಸ್ಥಗಿತಗೊಳ್ಳಲಿದೆ, ಹೊರ ರೋಗಿಗಳ ಚಿಕಿತ್ಸಾ ಸೇವೆ ಮತ್ತು ಶಸ್ತ್ರಚಿಕಿತ್ಸಾ ಘಟಕಗಳು ಈ ಅವಧಿಯಲ್ಲಿ ಕಾಯ೯ನಿವ೯ಹಿಸುವುದಿಲ್ಲ ಎಂದು ಮಾಹಿತಿ ನೀಡಿರುವ ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಶಾಖೆಯ ಅಧ್ಯಕ್ಷ ಡಾ.ನರಸಿಂಹ ಶರ್ಮಾ ಕಣವು, ಕಾರ್ಯದರ್ಶಿ ಡಾ.ಗಣೇಶ್ ಪ್ರಸಾದ್ ಮುದ್ರಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ
0 ಕಾಮೆಂಟ್ಗಳು