ಶಿವಮೊಗ್ಗ: ನಾಗರಪಂಚಮಿ ದಿನವೇ ಹಾವು ಕಚ್ಚಿ ವಿವಾಹಿತ ಯುವತಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ.
ದನಕರುಗಳಿಗೆ ಮೇವು ತರಲು ಹೋಗಿದ್ದ ವೇಳೆ ಪೊದೆಯಲ್ಲಿದ್ದ ಹಾವೊಂದು ಮಹಿಳೆಗೆ ಕಡಿದಿದೆ ಎನ್ನಲಾಗಿದೆ. ಕೆಲಹೊತ್ತಿನ ಬಳಿಕ ಹಾವು ಕಚ್ಚಿರುವುದು ಅವರಿಗೆ ಗೊತ್ತಾಗಿದೆ. ಮನೆಯವರು ನೋಡಿದಾಗ ರಂಜಿತಾ(22) ಗದ್ದೆಯಲ್ಲಿ ಕುಸಿದು ಬಿದ್ದಿದ್ದರು. ಇದನ್ನು ಗಮನಿಸಿ ತಕ್ಷಣ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗದ ಮಧ್ಯೆ ರಂಜಿತ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರಾದ ರಂಜಿತಾಗೆ ಮೂರು ವರ್ಷದ ಹೆಣ್ಣು ಮಗು ಹಾಗೂ ನಾಲ್ಕು ತಿಂಗಳ ಗಂಡು ಮಗು ಇದೆ.
0 ಕಾಮೆಂಟ್ಗಳು