ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಉಪ್ಪಿನಂಗಡಿ ಮೂಲದ ಅಬ್ದುಲ್ ಕರೀಂ ನನ್ನು ಪೋಲಿಸರು ಬಂಧಿಸಿದ್ದಾರೆ.
ಕಾಸರಗೋಡಿನ ಬದಿಯಡ್ಕ ಪೊಲೀಸರು ಕರೀಂ ನನ್ನು ವಶ ಪಡೆದಿದ್ದು ನ್ಯಾಯಲಯಕ್ಕೆ ಹಾಜರು ಪಡಿಸಿ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡದ ಉಪ್ಪಿನಂಗಡಿ ನಿವಾಸಿ ಇಬ್ರಾಹಿಂರ ಪುತ್ರ ಎಂದು ಗುರುತಿಸಲಾಗಿದೆ.
ಆರೋಪಿ ಅಬ್ದುಲ್ ಕರೀಂ ಉಸ್ತಾದ್ ಆಗಿದ್ದು, ಶನಿವಾರ ಮಧ್ಯಾಹ್ನ ಕುಂಬಳೆಯಿಂದ ಬದಿಯಡ್ಕ ಭಾಗಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಸೀತಾಂಗೋಳಿ ಸ್ಟಾಪ್ ದಾಟಿದ ಕೂಡಲೇ ಆರೋಪಿ ವಿದ್ಯಾರ್ಥಿನಿಗೆ ಕಿರುಕುಳ ನೀಡಲೆತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ವಿದ್ಯಾರ್ಥಿನಿ ಪ್ರತಿಭಟಿಸಿದಾಗ ಇತರ ಪ್ರಯಾಣಿಕರು ಮಧ್ಯ ಪ್ರವೇಶಿಸಿ ಆರೋಪಿಯನ್ನು ಹಿಡಿದು ಬದಿಯಡ್ಕ ಪೊಲೀಸರಿಗೆ ಒಪ್ಪಿಸಿದ್ದಾರೆ.
0 ಕಾಮೆಂಟ್ಗಳು